
ಕನ್ನಡದಲ್ಲಿ ಅರ್ಥಪೂರ್ಣ ಕೃಷಿಪತ್ರಿಕೋದ್ಯಮಕ್ಕೆ ಉತ್ತೇಜನ ನೀಡುವುದಕ್ಕಾಗಿ ಕೇಂದ್ರ ಕಳೆದ ಎಂಟು ವರ್ಷಗಳಿಂದ ಕೃಷಿಕರೇ ಬರೆದ ಲೇಖನ ಮತ್ತು ಮುಕ್ತ ವಿಭಾಗ ಹೀಗೆ ಎರಡು ವಿಭಾಗಗಳಲ್ಲಿ ಪ್ರಶಸ್ತಿ ನೀಡುತ್ತಿದೆ. ಈ ಬಾರಿ ಎರಡೂ ವಿಭಾಗಗಳನ್ನೂ ಸೇರಿಸಿ ಒಂದೇ ಪ್ರಶಸ್ತಿ. ನಾಗೇಂದ್ರ ಸಾಗರ್ ಬರೆದ 'ವರಿ ಇಳಿಸಿದ ರಸಾವರಿ' (ಅಡಿಕೆ ಪತ್ರಿಕೆ: ಜೂನ್, 2009) ಲೇಖನ ಕೃಷಿಪತ್ರಿಕೋದ್ಯಮ ಪ್ರಶಸ್ತಿಗಾಗಿ ಆಯ್ಕೆಯಾಗಿದೆ.
ಪ್ರಶಸ್ತಿ ಎರಡು ಸಾವಿರ ರೂಪಾಯಿ ನಗದು ಪುರಸ್ಕಾರ, ಪರಿಸರ ಶಿಲ್ಪ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಅಕ್ಟೋಬರ್ 25, 2009ರಂದು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬೆಂಗಳಿ ಗ್ರಾಮದಲ್ಲಿ ನಡೆಯಲಿರುವ ಕೇಂದ್ರದ 9ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ.
1 comments:
congratulations nagendra
Post a Comment