





ನಂತರ ವಿಚಾರ ಗೋಷ್ಠಿಗಳು. ವಿವಿಧ ವಿಚಾರಗಳ ಮಂಡನೆ. ಶ್ರೀ ಬಡೆಕ್ಕಿಲ ಶ್ಯಾಮಪ್ರಸಾದ್ ಶಾಸ್ತ್ರಿಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಗಂಧ ಬೆಳೆದ ಕೃಷಿಕ. ಅವರ ಅನುಭವ ಕಥನ - ಇಡೀ ಕೃಷಿ ಉತ್ಸವದ ಹೈಲೈಟ್! ಪವರ್ ಪಾಯಿಂಟ್ ಮೂಲಕ ವಿಚಾರದ ಪ್ರಸ್ತುತಿ.
ನಲವತ್ತಕ್ಕೂ ಮಿಕ್ಕಿದ ಮಳಿಗೆಗಳು. ಕಬ್ಬಿನ ಹಾಲಿನಿಂದ ಸ್ಪ್ರೇಯರ್ ತನಕ! ತರಕಾರಿ ಬೀಜಗಳಿಗೆ ಸ್ವಲ್ಪ ಮಟ್ಟಿನ ಆಸಕ್ತಿ. ಮಹಿಳೆಯರ ಒಲವು ನರ್ಸರಿಗಳತ್ತ - ಹೂ ಗಿಡಗಳತ್ತ!
'ಇಂತಹ ಕೃಷಿ ಉತ್ಸವಗಳಿಂದ ಕೃಷಿಯತ್ತ ಹೆಚ್ಚು ಆಸಕ್ತಿ ಹುಟ್ಟಿಸುವ ಮತ್ತು ಕೃಷ್ಯುತ್ಪನ್ನಗಳಿಗೆ ಗ್ರಾಹಕರನ್ನು ಸೆಳೆಯುವ ಅಜ್ಞಾತ ಕೆಲಸವಾಗುತ್ತಿದೆ. ಇದೊಂದು ಖುಷಿ ಉತ್ಸವ' - ಒಂದೇ ವಾಕ್ಯದಲ್ಲಿ ಮೇಳದ ಆಶಯವನ್ನು ಕಟ್ಟಿಕೊಟ್ಟರು ನಳಿನ್ ಕುಮಾರ್ ಕಟೀಲ್.
ಒಟ್ಟೂ ವ್ಯವಸ್ಥೆಯಲ್ಲಿ ಅಚ್ಚುಕಟ್ಟು-ಶಿಸ್ತು ಉತ್ಸವದ ಧನಾಂಶ.
0 comments:
Post a Comment