Tuesday, December 29, 2009

ಅಭಿವೃದ್ಧಿ- ಪರಿಸರ ಪತ್ರಿಕೋದ್ಯಮ ಪ್ರಶಸ್ತಿ

(ಚಿತ್ರದಲ್ಲಿ - ಅನಿತಾ ಪೈಲೂರು, ರಾಧಾಕೃಷ್ಣ ಎಸ್.ಭಡ್ತಿ, ಜಿ.ಕೃಷ್ಣಪ್ರಸಾದ್)
ರಾಜ್ಯ ಸರಕಾರವು ಕಳೆದ ಮೂರು ವರುಷಗಳ 'ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪ್ರಶಸ್ತಿ'ಗಳನ್ನು ಪ್ರಕಟಿಸಿದೆ. ಪ್ರಶಸ್ತಿಯು ತಲಾ ಐವತ್ತು ಸಾವಿರ ರೂಪಾಯಿ ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ.
ಪ್ರಶಸ್ತಿ ಪುರಸ್ಕೃತರು
ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ : ಟೈಮ್ಸ್ ಆಫ್ ಇಂಡಿಯಾ ಕನ್ನಡ ಆವೃತ್ತಿಯ ಸಂಪಾದಕ ಈಶ್ವರ ದೈತೋಟ (2007), ಧಾರವಾಡ ಆಕಾಶವಾಣಿ ಕೇಂದ್ರದ ಸಹಾಯಕ ನಿಲಯ ನಿರ್ದೆಶಕ ಸಿ.ಯು.ಬೆಳ್ಳಕ್ಕಿ (2008), ಧಾರವಾಡ ಕೃಷಿ ಮಾಧ್ಯಮ ಕೇಂದ್ರದ ಅನಿತಾ ಪೈಲೂರು (2009).

ಪರಿಸರ ಪತ್ರಿಕೋದ್ಯಮ ಪ್ರಶಸ್ತಿ : ಸಹಜ ಸಮೃದ್ಧದ ಮುಖ್ಯಸ್ಥ ಜಿ.ಕೃಷ್ಣಪ್ರಸಾದ್ (2007), ಹಿರಿಯ ಪತ್ರಕರ್ತ ಟಿ.ಆರ್.ಅನಂತರಾಮ (2008), ವಿಜಯಕರ್ನಾಟಕದ ಮುಖ್ಯ ಉಪಸಂಪಾದಕ ರಾಧಾಕೃಷ್ಣ ಎಸ್.ಭಡ್ತಿ (2009)

ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್ ಅಧ್ಯಕ್ಷರಾಗಿದ್ದ ಆಯ್ಕೆ ಸಮಿತಿಯಲ್ಲಿ - ಡಾ.ಎ.ಎನ್.ಯಲ್ಲಪ್ಪ ರೆಡ್ಡಿ, ಡಾ.ಎಚ್.ಆರ್.ಕೃಷ್ಣಮೂರ್ತಿ, ದು.ಗು.ಲಕ್ಷ್ಮಣ - ಸದಸ್ಯರು.

ಪ್ರಶಸ್ತಿ ಪುರಸ್ಕೃತರಿಗೆ ಹಾರ್ದಿಕ ಅಭಿನಂದನೆಗಳು.

0 comments:

Post a Comment