Thursday, June 3, 2010

ಕೃಷಿ-ಗ್ರಾಮೀಣ ಪತ್ರಿಕೋದ್ಯಮ ತರಬೇತಿಗೆ ಅರ್ಜಿ ಆಹ್ವಾನ

ಧಾರವಾಡದ ಕೃಷಿ ಮಾಧ್ಯಮ ಕೇಂದ್ರ 2010-11ನೇ ಸಾಲಿನ ಕೃಷಿ-ಗ್ರಾಮೀಣ ಪತ್ರಿಕೋದ್ಯಮ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬರುವ ಅಕ್ಟೋಬರ್ನಲ್ಲಿ ಶುರುವಾಗಲಿರುವ ಅಂಚೆ ತೆರಪಿನ (ಕರೆಸ್ಪಾಂಡೆನ್ಸ್) ತರಬೇತಿ ಒಂದು ವರ್ಷ ಅವಧಿಯದ್ದಾಗಿರುತ್ತದೆ.

ಕೃಷಿ-ಗ್ರಾಮೀಣ ಪತ್ರಿಕೋದ್ಯಮದ ಮಹತ್ವ ಮತ್ತು ಸ್ವರೂಪ, ಬರಹದ ಪ್ರಕಾರಗಳು, ಬರವಣಿಗೆಯ ತಂತ್ರಗಾರಿಕೆ, ಛಾಯಾ ಪತ್ರಿಕೋದ್ಯಮ ಇವೇ ಮುಂತಾದ ವಿಷಯಗಳ ಕುರಿತು ಅನುಭವಿ ಬರಹಗಾರರಿಂದ ತರಬೇತಿ ನೀಡಲಾಗುವುದು. ಪ್ರಾಯೋಗಿಕ ಕಲಿಕೆಗೆ ಹೆಚ್ಚಿನ ಅವಕಾಶವಿದೆ. ಕೃಷಿಕರು, ಕಾಲೇಜು ಮತ್ತು ವಿಶ್ವವಿದ್ಯಾಲಯುಗಳಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳ ಕಾರ್ಯುಕರ್ತರು, ಕೃಷಿ-ಗ್ರಾಮೀಣ ಸಂಬಂಧಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಕೆಲಸಮಾಡುತ್ತಿರುವವರಿಗೆ ಈ ತರಬೇತಿಯಿಂದ ವಿಶೇಷ ಪ್ರಯೋಜನವಿದೆ. ಇತರ ಆಸಕ್ತರೂ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ - ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಕಲಿಕೆ. ಕನ್ನಡ ಚೆನ್ನಾಗಿ ಬರೆಯಬಲ್ಲ ಇತರ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ವಯೋಮಿತಿ 50 ವರ್ಷ.

ಕನ್ನಡದಲ್ಲಿ ಕೃಷಿ-ಗ್ರಾಮೀಣ ಪತ್ರಿಕೋದ್ಯಮದ ಬೆಳವಣಿಗೆಗಾಗಿ ಕೃಷಿ ಮಾಧ್ಯಮ ಕೇಂದ್ರ ಏಳು ವರ್ಷಗಳ ಹಿಂದೆ ಈ ತರಬೇತಿ ಆರಂಭಿಸಿದೆ. ಮೊದಲ ಆರು ತಂಡಗಳಲ್ಲಿ ತೇರ್ಗಡೆಯಾದ 70 ಮಂದಿಯನ್ನು 'ಕಾಮ್ ಫೆಲೋ'ಗಳೆಂದು ಪರಿಗಣಿಸಲಾಗಿದೆ. ಏಳನೇ ತಂಡದಲ್ಲಿ 30 ಮಂದಿ ತರಬೇತಿ ಪಡೆಯುತ್ತಿದ್ದಾರೆ. ಇದುವರೆಗೆ ತರಬೇತಿ ಪಡೆದವರು ವಿವಿಧ ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುತ್ತಿದ್ದಾರೆ.

ಮಾಹಿತಿ ಪತ್ರ ಪಡೆದುಕೊಳ್ಳಲು ಕೊನೆಯ ದಿನ ಜುಲೈ 30, 2010. ಆಗಸ್ಟ್ 15ರ ಒಳಗಾಗಿ ಅರ್ಜಿ ನಮಗೆ ತಲುಪಬೇಕು. ಆಗಸ್ಟ್ 31ಕ್ಕೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗುವುದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕ್ಟೋಬರ್ 28ರಿಂದ 31ರ ವರೆಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ದೇವವೃಂದದಲ್ಲಿ ಪ್ರಾಥಮಿಕ ಶಿಬಿರ ನಡೆಸಲಾಗುವುದು. ಇದರಲ್ಲಿ ಅನುಭವಿ ಅಭಿವೃದ್ಧಿ ಬರಹಗಾರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಶಿಬಿರಾರ್ಥಿಗಳಿಗೆ ಲೇಖನ ಬರವಣಿಗೆಯಲ್ಲಿ ಮಾಹಿತಿ-ಮಾರ್ಗದರ್ಶನ ನೀಡಲಿದ್ದಾರೆ. ಕ್ಷೇತ್ರಭೇಟಿ ಹಾಗೂ ಬರವಣಿಗೆಯಲ್ಲಿ ಪ್ರಾಯೋಗಿಕ ತರಬೇತಿ ಕೂಡ ಇರುತ್ತದೆ.

ಮಾಹಿತಿ ಪತ್ರ, ಅರ್ಜಿ ಮತ್ತಿತರ ವಿವರಕ್ಕಾಗಿ 50 ರೂಪಾಯಿ ಮೌಲ್ಯದ ಅಂಚೆಚೀಟಿ ಜತೆಯಲ್ಲಿರಲಿ.

ರಾಜ್ಯಮಟ್ಟದ ಕೃಷಿಪತ್ರಿಕೋದ್ಯಮ ಪ್ರಶಸ್ತಿಗೆ ಆಹ್ವಾನ

ಧಾರವಾಡದ ಕೃಷಿ ಮಾಧ್ಯಮ ಕೇಂದ್ರ 2010ನೇ ಸಾಲಿನ ರಾಜ್ಯಮಟ್ಟದ ಕೃಷಿಪತ್ರಿಕೋದ್ಯಮ ಪ್ರಶಸ್ತಿಗೆ ಪ್ರವೇಶಗಳನ್ನು ಆಹ್ವಾನಿಸಿದೆ. ಕನ್ನಡದಲ್ಲಿ ಅರ್ಥಪೂರ್ಣ ಕೃಷಿ-ಗ್ರಾಮೀಣ ಪತ್ರಿಕೋದ್ಯಮಕ್ಕೆ ಉತ್ತೇಜನ ನೀಡುವುದಕ್ಕಾಗಿ ಕೇಂದ್ರ ಈ ಪ್ರಶಸ್ತಿ ಸ್ಥಾಪಿಸಿದೆ.

ಆಸಕ್ತರು ಸೆಪ್ಟೆಂಬರ್ 2009ರಿಂದ ಆಗಸ್ಟ್ 2010ರ ನಡುವೆ ಯಾವುದೇ ಪತ್ರಿಕೆ ಅಥವಾ ನಿಯತಕಾಲಿಕದಲ್ಲಿ ಪ್ರಕಟಗೊಂಡ ಕೃಷಿಕಪರ ಬರಹವನ್ನು ಕಳುಹಿಸಿಕೊಡಲು ಕೋರಲಾಗಿದೆ. ಒಬ್ಬರು ಗರಿಷ್ಠ ಎರಡು ಲೇಖನಗಳನ್ನು ಕಳುಹಿಸಬಹುದು. ಲೇಖಕರು ತಮ್ಮ ಪೂರ್ಣ ವಿಳಾಸ ಹಾಗೂ ಸಣ್ಣ ಪರಿಚಯ ಬರೆಯುವುದು ಅಗತ್ಯ. ಪ್ರವೇಶದೊಂದಿಗೆ ಬಂದ ಲೇಖನಗಳನ್ನು ಹಿಂದಿರುಗಿಸಲಾಗುವುದಿಲ್ಲ. ಪ್ರವೇಶದೊಂದಿಗೆ ಹತ್ತು ರೂಪಾಯಿ ಅಂಚೆಚೀಟಿ ಕಳುಹಿಸಲು ಕೋರಿಕೆ. ಪ್ರವೇಶ ಸ್ವೀಕರಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 5, 2010.

ವಿಳಾಸ:
ಕೃಷಿ ಮಾಧ್ಯಮ ಕೇಂದ್ರ,
119, 1ನೇ ಮುಖ್ಯರಸ್ತೆ, 4ನೇ ಅಡ್ಡರಸ್ತೆ, ನಾರಾಯಣಪುರ, ಧಾರವಾಡ - 580 008.

0 comments:

Post a Comment